ರಾಮನಗರ:27.8.2022; ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವು ಕೆರೆ ಕಟ್ಟೆಗಳು ತುಂಬಿ ಕೋಡಿ ಹರಿದಿವೆ. ಪರಿಣಾಮ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರಿನ ಪ್ರವಾಹ ಉಂಟಾಗಿ ರಸ್ತೆಗಳು ಜಲಾವೃತವಾಗಿವೆ. ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ಹೆದ್ದಾರಿಯಲ್ಲಿನ ಸುಗಮ ಪ್ರಯಾಣಕ್ಕೆ ತೊಂದರೆಯಾಗುವ ಸಂಭವವಿದ್ದು, ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರು – ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಪ್ರಯಾಣಿಕರು, ಬೆಂಗಳೂರು – ಕನಕಪುರ – ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು- ಕುಣಿಗಲ್- ಮೈಸೂರು ಮಾರ್ಗವಾಗಿ ಪ್ರಯಾಣ ಮಾಡಲು ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ.
You must be logged in to post a comment.